Home ಕ್ರಿಕೆಟ್ ನವೆಂಬರ್ 29 ರಿಂದ ಟೆನಿಸ್ಬಾಲ್ ಕ್ರಿಕೆಟ್ ನ ವಿಶ್ವಕಪ್ ಖ್ಯಾತಿಯ- ಶಾಮನೂರು ಡೈಮಂಡ್ ಮತ್ತು ಶಿವಗಂಗಾ ಕಪ್-2023

ನವೆಂಬರ್ 29 ರಿಂದ ಟೆನಿಸ್ಬಾಲ್ ಕ್ರಿಕೆಟ್ ನ ವಿಶ್ವಕಪ್ ಖ್ಯಾತಿಯ- ಶಾಮನೂರು ಡೈಮಂಡ್ ಮತ್ತು ಶಿವಗಂಗಾ ಕಪ್-2023

ನವೆಂಬರ್ 29 ರಿಂದ ಟೆನಿಸ್ಬಾಲ್ ಕ್ರಿಕೆಟ್ ನ ವಿಶ್ವಕಪ್ ಖ್ಯಾತಿಯ- ಶಾಮನೂರು ಡೈಮಂಡ್ ಮತ್ತು ಶಿವಗಂಗಾ ಕಪ್-2023
ದಾವಣಗೆರೆ-ದಾವಣಗೆರೆ ಇಲೆವೆನ್ ಕ್ರಿಕೆಟ್ ಕ್ಲಬ್ ಹಾಗೂ ಜಿಲ್ಲಾ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಇವರ ಆಶ್ರಯದಲ್ಲಿ,ದಾವಣಗೆರೆಯ ಶಾಸಕರು ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ ನವರ ಧರ್ಮಪತ್ನಿ ದಿ.ಪಾರ್ವತಮ್ಮನವರ ಸವಿನೆನಪಿನ ಅಂಗವಾಗಿ,ಗಣಿ ಭೂ ವಿಜ್ಞಾನ ಮತ್ತು ತೋಟಗಾರಿಕೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ,
ಉದ್ಯಮಿ ಶಿವಗಂಗಾ ಶ್ರೀನಿವಾಸ್ ಶಾಮನೂರು ಶಿವಶಂಕರಪ್ಪನವರ ಆಪ್ತರು ದಿನೇಶ್.ಕೆ.ಶೆಟ್ಟಿ ಮತ್ತು ಕುರುಡಿ ಗಿರೀಶ್,ಪ್ರಥಮ ದರ್ಜೆ ಗುತ್ತಿಗೆದಾರ ಮುನಿ ರೆಡ್ಡಿ ಇವರ ಸಹಕಾರದೊಂದಿಗೆ,ಕ್ರೀಡಾ ಪ್ರೋತ್ಸಾಹಕರಾದ ಜಯಪ್ರಕಾಶ್ ಗೌಡ(ಜೆ.ಪಿ) ಇವರ ದಕ್ಷ ಸಾರಥ್ಯದಲ್ಲಿ,ದಾಖಲೆಯ ಸತತ 16 ನೇ ಬಾರಿಗೆ ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ  ಆಯೋಜಿಸಲಾಗಿದೆ.
ಟೆನಿಸ್ಬಾಲ್ ಕ್ರಿಕೆಟ್ ನ ವಿಶ್ವಕಪ್ ಎಂದೇ ಖ್ಯಾತಿ ಗಳಿಸಿದ “ಶಾಮನೂರು ಡೈಮಂಡ್,ಶಿವಗಂಗಾ ಕಪ್-2023” ಹೊನಲು ಬೆಳಕಿನ ಈ ರಾಷ್ಟ್ರೀಯ ಮಟ್ಟದ ಪಂದ್ಯಾಟ,
ನವೆಂಬರ್ 29 ರಿಂದ ಡಿಸೆಂಬರ್ 3 ರ ತನಕ ಸತತ 5 ದಿನಗಳ ಕಾಲ ದಾವಣಗೆರೆಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಮುಂಬಯಿ,ಮಧ್ಯಪ್ರದೇಶ,ಛತ್ತೀಸ್ಗಢ,ಚೆನ್ನೈ,ಕೇರಳ,ಕರ್ನಾಟಕ ಸೇರಿದಂತೆ ಒಟ್ಟು 50 ಬಲಿಷ್ಠ ತಂಡಗಳು ಪ್ರತಿಷ್ಠಿತ ಪ್ರಶಸ್ತಿಗಾಗಿ ಸೆಣಸಾಡಲಿದ್ದು,
ದಾವಣಗೆರೆ ಸೇರಿದಂತೆ ರಾಜ್ಯದಾದ್ಯಂತ ಲಕ್ಷಾಂತರ ಕ್ರೀಡಾಭಿಮಾನಿಗಳು ಪಂದ್ಯಾಟದ ಸವಿಯನ್ನು ಸವಿಯಲಿದ್ದಾರೆ.M9Sports ಯೂಟ್ಯೂಬ್ ಚಾನೆಲ್ ನಲ್ಲಿ ಪಂದ್ಯಾಟದ ನೇರ ಪ್ರಸಾರ ಬಿತ್ತರಗೊಳ್ಳಲಿದೆ.
ಶಾಮನೂರು ಶಿವಗಂಗಾ ಕಪ್-2023 ಪಂದ್ಯಾವಳಿಯ ಪ್ರಥಮ ಬಹುಮಾನ 5,00,555 ರೂ ನಗದು,ದ್ವಿತೀಯ ಸ್ಥಾನಿ 3,00,555 ರೂ ನಗದು,ತೃತೀಯ ಸ್ಥಾನಿ 1,55,555 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದು ವೈಯಕ್ತಿಕ ಶ್ರೇಷ್ಠ ನಿರ್ವಹಣೆ ನೀಡಿದ ಆಟಗಾರರು ವಿಶೇಷ ಪ್ರಶಸ್ತಿಗಳನ್ನು ಪಡೆಯಲಿದ್ದಾರೆ.

LEAVE A REPLY

Please enter your comment!
Please enter your name here

11 + 20 =

ನವೆಂಬರ್ 29 ರಿಂದ ಟೆನಿಸ್ಬಾಲ್ ಕ್ರಿಕೆಟ್ ನ ವಿಶ್ವಕಪ್ ಖ್ಯಾತಿಯ- ಶಾಮನೂರು ಡೈಮಂಡ್ ಮತ್ತು ಶಿವಗಂಗಾ ಕಪ್-2023

ದಾವಣಗೆರೆ-ದಾವಣಗೆರೆ ಇಲೆವೆನ್ ಕ್ರಿಕೆಟ್ ಕ್ಲಬ್ ಹಾಗೂ ಜಿಲ್ಲಾ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಇವರ ಆಶ್ರಯದಲ್ಲಿ,ದಾವಣಗೆರೆಯ ಶಾಸಕರು ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ ನವರ ಧರ್ಮಪತ್ನಿ ದಿ.ಪಾರ್ವತಮ್ಮನವರ ಸವಿನೆನಪಿನ ಅಂಗವಾಗಿ,ಗಣಿ ಭೂ ವಿಜ್ಞಾನ ಮತ್ತು ತೋಟಗಾರಿಕೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ, ಉದ್ಯಮಿ ಶಿವಗಂಗಾ ಶ್ರೀನಿವಾಸ್ ಶಾಮನೂರು ಶಿವಶಂಕರಪ್ಪನವರ ಆಪ್ತರು ದಿನೇಶ್.ಕೆ.ಶೆಟ್ಟಿ ಮತ್ತು ಕುರುಡಿ ಗಿರೀಶ್,ಪ್ರಥಮ ದರ್ಜೆ ಗುತ್ತಿಗೆದಾರ ಮುನಿ ರೆಡ್ಡಿ ಇವರ ಸಹಕಾರದೊಂದಿಗೆ,ಕ್ರೀಡಾ ಪ್ರೋತ್ಸಾಹಕರಾದ ಜಯಪ್ರಕಾಶ್ ಗೌಡ(ಜೆ.ಪಿ) ಇವರ ದಕ್ಷ ಸಾರಥ್ಯದಲ್ಲಿ,ದಾಖಲೆಯ ಸತತ 16 ನೇ ಬಾರಿಗೆ ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ  ಆಯೋಜಿಸಲಾಗಿದೆ. ಟೆನಿಸ್ಬಾಲ್ ಕ್ರಿಕೆಟ್ ನ ವಿಶ್ವಕಪ್ ಎಂದೇ ಖ್ಯಾತಿ ಗಳಿಸಿದ "ಶಾಮನೂರು ಡೈಮಂಡ್,ಶಿವಗಂಗಾ ಕಪ್-2023" ಹೊನಲು ಬೆಳಕಿನ ಈ ರಾಷ್ಟ್ರೀಯ ಮಟ್ಟದ ಪಂದ್ಯಾಟ, ನವೆಂಬರ್ 29 ರಿಂದ ಡಿಸೆಂಬರ್ 3 ರ ತನಕ ಸತತ 5 ದಿನಗಳ ಕಾಲ ದಾವಣಗೆರೆಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಮುಂಬಯಿ,ಮಧ್ಯಪ್ರದೇಶ,ಛತ್ತೀಸ್ಗಢ,ಚೆನ್ನೈ,ಕೇರಳ,ಕರ್ನಾಟಕ ಸೇರಿದಂತೆ ಒಟ್ಟು 50 ಬಲಿಷ್ಠ ತಂಡಗಳು ಪ್ರತಿಷ್ಠಿತ ಪ್ರಶಸ್ತಿಗಾಗಿ ಸೆಣಸಾಡಲಿದ್ದು, ದಾವಣಗೆರೆ

Send this to a friend