14.9 C
London
Tuesday, April 30, 2024
Homeಕ್ರಿಕೆಟ್ನವೆಂಬರ್ 29 ರಿಂದ ಟೆನಿಸ್ಬಾಲ್ ಕ್ರಿಕೆಟ್ ನ ವಿಶ್ವಕಪ್ ಖ್ಯಾತಿಯ- ಶಾಮನೂರು ಡೈಮಂಡ್ ಮತ್ತು ಶಿವಗಂಗಾ...

ನವೆಂಬರ್ 29 ರಿಂದ ಟೆನಿಸ್ಬಾಲ್ ಕ್ರಿಕೆಟ್ ನ ವಿಶ್ವಕಪ್ ಖ್ಯಾತಿಯ- ಶಾಮನೂರು ಡೈಮಂಡ್ ಮತ್ತು ಶಿವಗಂಗಾ ಕಪ್-2023

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ದಾವಣಗೆರೆ-ದಾವಣಗೆರೆ ಇಲೆವೆನ್ ಕ್ರಿಕೆಟ್ ಕ್ಲಬ್ ಹಾಗೂ ಜಿಲ್ಲಾ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಇವರ ಆಶ್ರಯದಲ್ಲಿ,ದಾವಣಗೆರೆಯ ಶಾಸಕರು ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ ನವರ ಧರ್ಮಪತ್ನಿ ದಿ.ಪಾರ್ವತಮ್ಮನವರ ಸವಿನೆನಪಿನ ಅಂಗವಾಗಿ,ಗಣಿ ಭೂ ವಿಜ್ಞಾನ ಮತ್ತು ತೋಟಗಾರಿಕೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ,
ಉದ್ಯಮಿ ಶಿವಗಂಗಾ ಶ್ರೀನಿವಾಸ್ ಶಾಮನೂರು ಶಿವಶಂಕರಪ್ಪನವರ ಆಪ್ತರು ದಿನೇಶ್.ಕೆ.ಶೆಟ್ಟಿ ಮತ್ತು ಕುರುಡಿ ಗಿರೀಶ್,ಪ್ರಥಮ ದರ್ಜೆ ಗುತ್ತಿಗೆದಾರ ಮುನಿ ರೆಡ್ಡಿ ಇವರ ಸಹಕಾರದೊಂದಿಗೆ,ಕ್ರೀಡಾ ಪ್ರೋತ್ಸಾಹಕರಾದ ಜಯಪ್ರಕಾಶ್ ಗೌಡ(ಜೆ.ಪಿ) ಇವರ ದಕ್ಷ ಸಾರಥ್ಯದಲ್ಲಿ,ದಾಖಲೆಯ ಸತತ 16 ನೇ ಬಾರಿಗೆ ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ  ಆಯೋಜಿಸಲಾಗಿದೆ.
ಟೆನಿಸ್ಬಾಲ್ ಕ್ರಿಕೆಟ್ ನ ವಿಶ್ವಕಪ್ ಎಂದೇ ಖ್ಯಾತಿ ಗಳಿಸಿದ “ಶಾಮನೂರು ಡೈಮಂಡ್,ಶಿವಗಂಗಾ ಕಪ್-2023” ಹೊನಲು ಬೆಳಕಿನ ಈ ರಾಷ್ಟ್ರೀಯ ಮಟ್ಟದ ಪಂದ್ಯಾಟ,
ನವೆಂಬರ್ 29 ರಿಂದ ಡಿಸೆಂಬರ್ 3 ರ ತನಕ ಸತತ 5 ದಿನಗಳ ಕಾಲ ದಾವಣಗೆರೆಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಮುಂಬಯಿ,ಮಧ್ಯಪ್ರದೇಶ,ಛತ್ತೀಸ್ಗಢ,ಚೆನ್ನೈ,ಕೇರಳ,ಕರ್ನಾಟಕ ಸೇರಿದಂತೆ ಒಟ್ಟು 50 ಬಲಿಷ್ಠ ತಂಡಗಳು ಪ್ರತಿಷ್ಠಿತ ಪ್ರಶಸ್ತಿಗಾಗಿ ಸೆಣಸಾಡಲಿದ್ದು,
ದಾವಣಗೆರೆ ಸೇರಿದಂತೆ ರಾಜ್ಯದಾದ್ಯಂತ ಲಕ್ಷಾಂತರ ಕ್ರೀಡಾಭಿಮಾನಿಗಳು ಪಂದ್ಯಾಟದ ಸವಿಯನ್ನು ಸವಿಯಲಿದ್ದಾರೆ.M9Sports ಯೂಟ್ಯೂಬ್ ಚಾನೆಲ್ ನಲ್ಲಿ ಪಂದ್ಯಾಟದ ನೇರ ಪ್ರಸಾರ ಬಿತ್ತರಗೊಳ್ಳಲಿದೆ.
ಶಾಮನೂರು ಶಿವಗಂಗಾ ಕಪ್-2023 ಪಂದ್ಯಾವಳಿಯ ಪ್ರಥಮ ಬಹುಮಾನ 5,00,555 ರೂ ನಗದು,ದ್ವಿತೀಯ ಸ್ಥಾನಿ 3,00,555 ರೂ ನಗದು,ತೃತೀಯ ಸ್ಥಾನಿ 1,55,555 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದು ವೈಯಕ್ತಿಕ ಶ್ರೇಷ್ಠ ನಿರ್ವಹಣೆ ನೀಡಿದ ಆಟಗಾರರು ವಿಶೇಷ ಪ್ರಶಸ್ತಿಗಳನ್ನು ಪಡೆಯಲಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

eighteen + 15 =