ಕ್ರಿಕೆಟ್83 ರ ವಿಶ್ವಕಪ್ ಗೆದ್ದ ಭಾರತ ತಂಡದಲ್ಲಿದ್ದ ಯಶ್‌ಪಾಲ್ ಶರ್ಮಾ ಇಂದು...

83 ರ ವಿಶ್ವಕಪ್ ಗೆದ್ದ ಭಾರತ ತಂಡದಲ್ಲಿದ್ದ ಯಶ್‌ಪಾಲ್ ಶರ್ಮಾ ಇಂದು ಕೊನೆ ಉಸಿರೆಳೆದಿದ್ದಾರೆ…

-

- Advertisment -spot_img
ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ 83 ರ  ವಿಶ್ವಕಪ್‌ ನಲ್ಲಿ ಟೀಮ್ ಇಂಡಿಯಾ ಪರ ಅದ್ಭುತವಾಗಿ ಬ್ಯಾಟಿಂಗ್ ಮಾಡಿ ಭಾರತದ ಮಡಿಲಿಗೆ ಮೊದಲ ವಿಶ್ವಕಪ್ ಗೆದ್ದುಕೊಟ್ಟಂತಹ ತಂಡದಲ್ಲಿದ್ದ ಮಾಜಿ ಕ್ರಿಕೆಟರ್ ಯಶ್‌ಪಾಲ್‌ ಶರ್ಮಾ ಇಂದು ನಿಧನರಾಗಿದ್ದಾರೆ.
ತೀವ್ರ ಹೃದಯಾಘಾತದಿಂದ ಶರ್ಮಾ ಇಂದು (ಜುಲೈ 13) ನಿಧನರಾಗಿರುವುದಾಗಿ ತಿಳಿದುಬಂದಿದೆ. ಮೂಲತಃ ಪಂಜಾಬ್‌ನವರಾದ ಯಶ್‌ಪಾಲ್‌ಗೆ ಸುಮಾರು 66 ವರ್ಷ ವಯಸ್ಸಾಗಿತ್ತು.
70 ಮತ್ತು 80ನೇ ದಶಕದ ವೇಳೆ ಯಶ್‌ಪಾಲ್‌ ಶರ್ಮಾ ಕ್ರಿಕೆಟ್‌ ವೃತ್ತಿ ಬದುಕಿನಲ್ಲಿ ಕ್ರಿಕೆಟ್ ಅಂಗಳದಲ್ಲಿ ಮಿಂಚಿದವರು. 1983ರ ವಿಶ್ವಕಪ್‌ ವೇಳೆ ಇಂಗ್ಲೆಂಡ್‌ ವಿರುದ್ಧದ ಸೆಮಿಫೈನಲ್‌ನಲ್ಲಿ ಶರ್ಮಾ ಬಾರಿಸಿದ 61 ರನ್‌ ಗಳು ತಂಡದ ಗೆಲುವಿಗೆ ಕಾರಣವಾಗಿತ್ತು. ಭಾರತ ತಂಡದ ಪರ ಯಶ್‌ಪಾಲ್ ಅವರು 37 ಟೆಸ್ಟ್‌ ಪಂದ್ಯ, 42 ಏಕದಿನ ಪಂದ್ಯಗಳನ್ನಾಡಿದ್ದಾರೆ.
ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ ಆಗಿದ್ದ ಯಶ್‌ಪಾಲ್ ಶರ್ಮಾ 37 ಟೆಸ್ಟ್‌ ಪಂದ್ಯಗಳಲ್ಲಿ 1606 ರನ್, 2 ಶತಕ, 9 ಅರ್ಧ ಶತಕ, 42 ಏಕದಿನ ಪಂದ್ಯಗಳಲ್ಲಿ 883 ರನ್, 4 ಅರ್ಧ ಶತಕ ಬಾರಿಸಿದ್ದಾರೆ. ಇನ್ನು ಲಿಸ್ಟ್‌ ಎ 74 ಪಂದ್ಯಗಳಲ್ಲಿ 1859 ರನ್, 160 ಪ್ರಥಮದರ್ಜೆ ಕ್ರಿಕೆಟ್ ಪಂದ್ಯಗಳಲ್ಲಿ 8933 ರನ್ ದಾಖಲೆ ಹೊಂದಿದ್ದಾರೆ.1979 ರಲ್ಲಿ
ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಮೂಲಕ ಭಾರತೀಯ ಕ್ರಿಕೆಟ್ ತಂಡಕ್ಕೆ ಪಾದಾರ್ಪಣೆ ಮಾಡಿದ್ದ ಯಶ್‌ಪಾಲ್, 1978ರಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದ ಮೂಲಕ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಶರ್ಮಾ ಮಡದಿ ರೇಣು ಶರ್ಮಾ, ಇಬ್ಬರು ಪುತ್ರಿಯರಾದ ಪೂಜಾ, ಪ್ರೀತಿ ಮತ್ತು ಒಬ್ಬ ಪುತ್ರ ಚಿರಾಗ್ ಶರ್ಮಾ ಅವರನ್ನು ಅಗಲಿದ್ದಾರೆ.
ಕ್ರಿಕೆಟ್ ನಿವೃತ್ತಿಯ ಬಳಿಕ ಶರ್ಮಾ ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ), ಪಂಜಾಬ್ ಮತ್ತು ಹರ್ಯಾಣ ಕ್ರಿಕೆಟ್‌ನಲ್ಲಿ ಬೇರೆ ಬೇರೆ ಕರ್ವವ್ಯಗಳನ್ನು ನಿಭಾಯಿಸುತ್ತಾ  ಕ್ರಿಕೆಟ್ ನಂಟನ್ನು ನಿವೃತ್ತಿ ನಂತರವು ಮುಂದುವರೆಸಿಕೊಂಡು ಹೊಗುತ್ತಿದ್ದರು. ಕ್ರಿಕೆಟ್ ವಿಶ್ಲೇಷಕರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.
ಯಶ್ ಪಾಲ್ ಶರ್ಮಾ ಭಾರತೀಯ ಕ್ರಿಕೆಟ್ ಕಂಡ ಒಬ್ಬ ಮನಮೋಹಕ ಆಟಗಾರ ಇಂದು ತಮ್ಮ ಬದುಕಿಗೆ ವಿದಾಯ ಹೇಳಿ ಅಪಾರ ಅಭಿಮಾನಿಗಳನ್ನು ಕ್ರಿಕೆಟ್ ಪ್ರಿಯರನ್ನು ಬಿಟ್ಟಿ ಅಗಲಿದ್ದಾರೆ……
ಸುಧೀರ್ ವಿಧಾತ
ಸುಧೀರ್ ವಿಧಾತ
*- ಸುಧೀರ್ ವಿಧಾತ, ಭಾರತ್ ಕ್ರಿಕೆಟರ್ಸ್, ಶಿವಮೊಗ್ಗ*

LEAVE A REPLY

Please enter your comment!
Please enter your name here

five × two =

Latest news

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...
- Advertisement -spot_imgspot_img

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ ಕಾಮಧೇನು‌ ಗೋಶಾಲೆ ಮಹಾಸಂಘ ಟ್ರಸ್ಟ್(ರಿ)ನಂಚಾರು ಇಲ್ಲಿರುವ ಗೋವುಗಳಿಗಾಗಿ 12 ನೇ...

Must read

- Advertisement -spot_imgspot_img

You might also likeRELATED
Recommended to you