6.3 C
London
Tuesday, April 23, 2024
Homeಅಥ್ಲೆಟಿಕ್ಸ್ಯೋಗ ರತ್ನ ತನುಶ್ರೀ ಪಿತ್ರೋಡಿಯವರ 2 ನೇ ಗಿನ್ನಿಸ್ ದಾಖಲೆಯ ಪ್ರಮಾಣ ಪತ್ರ ಸ್ವೀಕಾರ ಸಮಾರಂಭ

ಯೋಗ ರತ್ನ ತನುಶ್ರೀ ಪಿತ್ರೋಡಿಯವರ 2 ನೇ ಗಿನ್ನಿಸ್ ದಾಖಲೆಯ ಪ್ರಮಾಣ ಪತ್ರ ಸ್ವೀಕಾರ ಸಮಾರಂಭ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಉಡುಪಿ-ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ,ಯೋಗರತ್ನ ತನುಶ್ರೀ ಪಿತ್ರೋಡಿ ಅವರ ಎರಡನೇ ಗಿನ್ನೆಸ್ ದಾಖಲೆಯ ಪ್ರಮಾಣ ಪತ್ರ ಸ್ವೀಕಾರ ಸಮಾರಂಭ  ನಗರದ ಸೈಂಟ್ ಸಿಸಿಲೀಸ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ‌ ಯಶ್ ಪಾಲ್ ಸುವರ್ಣ ಜಯಕರ್ ಶೆಟ್ಟಿ ಇಂದ್ರಾಳಿ , ಗುರು ರಾಮಕೃಷ್ಣ ಕೊಡಂಚ, ಅಭಿನಯಾ ಅಧ್ಯಕ್ಷ ಉಮೇಶ್ ಅಲೆವೂರು , ಶ್ರೀಮತಿ ಸರಿತಾ ,ಸಿಸ್ಟರ್ ತೆರೆಸಾ ಜ್ಯೋತಿ,  ದೈಹಿಕ ಶಿಕ್ಷಕ ದಿನೇಶ್ ಸರ್, ವಿಜಯ್ ಕೋಟ್ಯಾನ್ , ಕೃಷ್ಣ ಕುಲಾಲ್ ಉಪಸ್ಥಿತರಿದ್ದರು.
“ಜ್ಞಾನದ ಬೆಳಕು ತೋರಿದ ಗುರುವಿಗೊಂದು ನಮನ” ಶೀರ್ಷಿಕೆಯಡಿ ನಡೆದ ಈ ಕಾರ್ಯಕ್ರಮದಲ್ಲಿ ತನುಶ್ರೀ ಪಿತ್ರೋಡಿಯವರಿಗೆ ಆರಂಭದಿಂದ ಇದುವರೆಗೆ ಶಿಕ್ಷಣ ನೀಡಿದ ಎಲ್ಲಾ ಗುರುಗಳನ್ನು ಗೌರವಿಸಿ ಗುರುವಂದನೆ ಸಲ್ಲಿಸಲಾಯಿತು.
ಈ ಹಿಂದೆ 2023 ಜುಲೈನಲ್ಲಿ
ಮೋಸ್ಟ್ ಬ್ಯಾಕ್ವರ್ಡ್ ಸ್ಟೆಪ್ಸ್ ಇನ್ ಒನ್ ಮಿನಿಟ್… ದೇಹದ ಹಿಂಭಾಗಕ್ಕೆ‌ ಎರಡೂ ಕೈಗಳನ್ನು ಚಲಿಸಿ ಪಾದವನ್ನು ಸುತ್ತುವರಿದು ಮತ್ತೆ ಮುಂಭಾಗಕ್ಕೆ ಬರುವ ರೀತಿಯ ಭಂಗಿಯನ್ನು  ತನುಶ್ರೀ ಒಂದು ನಿಮಿಷದಲ್ಲಿ 53 ಬಾರಿ  ಮಾಡಿದ್ದರು. ಆ ಸಾಧನೆಯನ್ನು ಗಿನ್ನೆಸ್ ಸಂಸ್ಥೆ ಪರಿಶೀಲಿಸಿ ಇದೀಗ ಪ್ರಮಾಣ ಪತ್ರ ನೀಡಿದೆ.
ಯುವ ಬರಹಗಾರ ಧೀರಜ್ ಬೆಳ್ಳಾರೆ ಕಾರ್ಯಕ್ರಮ ನಿರ್ವಹಿಸಿದರು. ಸಂಧ್ಯಾ ಉದಯ್ ಮತ್ತು ರೀತು ಶ್ರೀ ಕಾರ್ಯಕ್ರಮ‌ ಆಯೋಜಿಸಿದರು.
ಚಿತ್ರಕೃಪೆ
ರತನ್ ಸುರಭಿ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

10 − seven =