Uncategorizedಒಂದೇ ರನ್ನಿಂದ ಶತಕದ ಜೋಶ್ ತಪ್ಪಿಸಿಕೊಂಡ ಜೋಸ್, ಕರ್ನಾಟಕಕ್ಕೆ ಸಿಗಲಿಲ್ಲ ಗ್ರ್ಯಾಂಡ್...

ಒಂದೇ ರನ್ನಿಂದ ಶತಕದ ಜೋಶ್ ತಪ್ಪಿಸಿಕೊಂಡ ಜೋಸ್, ಕರ್ನಾಟಕಕ್ಕೆ ಸಿಗಲಿಲ್ಲ ಗ್ರ್ಯಾಂಡ್ ಓಪನಿಂಗ್!

-

- Advertisment -spot_img

ಒಂದೇ ರನ್ನಿಂದ ಶತಕದ ಜೋಶ್ ತಪ್ಪಿಸಿಕೊಂಡ ಜೋಸ್, ಕರ್ನಾಟಕಕ್ಕೆ ಸಿಗಲಿಲ್ಲ  ಗ್ರ್ಯಾಂಡ್ಓಪನಿಂಗ್!

ಇಂದೋರ್’ನಲ್ಲಿ ನಡೆದ ಕರ್ನಾಟಕ ಹಾಗೂ ಆತಿಥೇಯ ಮಧ್ಯಪ್ರದೇಶ ತಂಡಗಳ ನಡುವಿನ ಸಿ ರಣಜಿ ಪಂದ್ಯ ನೀರಸ ಡ್ರಾದಲ್ಲಿ ಅಂತ್ಯಗೊಂಡಿದೆ.

ಇದರೊಂದಿಗೆ ಸಿ ಗುಂಪಿನಲ್ಲಿ ಗೆಲುವಿನೊಂದಿಗೆ ಈ ಬಾರಿಯ ರಣಜಿ ಅಭಿಯಾನ ಆರಂಭಿಸುವ ಲೆಕ್ಕಾಚಾರದಲ್ಲಿದ್ದ ಕರ್ನಾಟಕಕ್ಕೆ ಭಾರೀ ನಿರಾಸೆಯಾಗಿದೆ. ಪ್ರಥಮ ಇನ್ನಿಂಗ್ಸ್ ಪೂರ್ತಿಗೊಳ್ಳದೆ ಪಂದ್ಯ ಡ್ರಾಗೊಂಡ ಕಾರಣ ಎರಡೂ ತಂಡಗಳಿಗೆ ತಲಾ ಒಂದೊಂದು ಅಂಕ ಸಿಕ್ಕಿದೆ.

ಮಳೆಯಿಂದ ಅಡಚಣೆಗೊಳಗಾದ ಪಂದ್ಯದಲ್ಲಿ ಮಧ್ಯಪ್ರದೇಶ ತಂಡ ತನ್ನ ಪ್ರಥಮ ಇನ್ನಿಂಗ್ಸ್’ನಲ್ಲಿ 8 ವಿಕೆಟ್ ನಷ್ಟಕ್ಕೆ 425 ರನ್ ಗಳಿಸಿ ಇನ್ನಿಂಗ್ಸ್ ಡಿಕ್ಲೇರ್ ಘೋಷಿಸಿತ್ತು. ಇದಕ್ಕೆ ಪ್ರತಿಯಾಗಿ ಮಯಾಂಕ್ ಅಗರ್ವಾಲ್ ನಾಯಕತ್ವದ ಕರ್ನಾಟಕ ತನ್ನ ಪ್ರಥಮ ಇನ್ನಿಂಗ್ಸ್’ನಲ್ಲಿ 5 ವಿಕೆಟ್ ನಷ್ಟಕ್ಕೆ 206 ರನ್ ಗಳಿಸಿತು.

ಕರ್ನಾಟಕ ಪರ ಆರಂಭಿಕನಾಗಿ ಕಣಕ್ಕಿಳಿದ ಬಲಗೈ ಬ್ಯಾಟರ್ ನಿಕಿನ್ ಜೋಸ್ 99 ರನ್’ಗಳಿಗೆ ಔಟಾಗುವ ಮೂಲಕ ಪ್ರಸಕ್ತ ಸಾಲಿನ ಮೊದಲ ಪಂದ್ಯದಲ್ಲೇ ಶತಕ ಸಾಧನೆಯಿಂದ ವಂಚಿತರಾದರು. ನಾಯಕ ಮಯಾಂಕ್ ಅಗರ್ವಾಲ್ ಇನ್ನಿಂಗ್ಸ್’ನ ಮೊದಲ ಓವರ್’ನಲ್ಲೇ ಶೂನ್ಯಕ್ಕೆ ಔಟಾದರೆ, 3ನೇ ಕ್ರಮಾಂಕದಲ್ಲಿ ಕ್ರೀಸ್’ಗಿಳಿದ ಎಡಗೈ ಬ್ಯಾಟರ್ ದೇವದತ್ತ್ ಪಡಿಕ್ಕಲ್ 16 ರನ್ ಗಳಿಸಿದರು. ರಣಜಿ ಪದಾರ್ಪಣೆಯ ಪಂದ್ಯದಲ್ಲಿ ಸ್ಮರಣ್ ಆರ್. 17 ರನ್ ಗಳಿಸಿ ಔಟಾದರೆ, ಉಪನಾಯಕ ಮನೀಶ್ ಪಾಂಡೆ ಗಳಿಸಿದ್ದು ಕೇವಲ 9 ರನ್. 72 ರನ್’ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ನಿಕಿನ್ ಜೋಸ್ ಮತ್ತು ಆಲ್ರೌಂಡರ್ ಶ್ರೇಯಸ್ ಗೋಪಾಲ್ ಆಸರೆಯಾದರು. ಈ ಬಲಗೈ ಜೋಡಿ 5ನೇ ವಿಕೆಟ್’ಗೆ 127 ರನ್’ಗಳ ಜೊತೆಯಾಟವಾಡಿ ತಂಡಕ್ಕೆ ಆಸರೆಯಾಯಿತು.

ಇದೇ ಶುಕ್ರವಾರ (ಅಕ್ಟೋಬರ್ 18) ಬೆಂಗಳೂರಿನ ಹೊರವಲಯದಲ್ಲಿರುವ ಆಲೂರಿನ ಕೆ.ಎಸ್.ಸಿ.ಎ ಕ್ರೀಡಾಂಗಣದಲ್ಲಿ ಆರಂಭವಾಗಲಿರುವ ತನ್ನ 2ನೇ ಲೀಗ್ ಪಂದ್ಯದಲ್ಲಿ ಕರ್ನಾಟಕ ತಂಡ, ಕೇರಳ ತಂಡವನ್ನು ಎದುರಿಸಲಿದೆ.

LEAVE A REPLY

Please enter your comment!
Please enter your name here

5 × 4 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you